ಹಾಸನ: ಕೆಎಸ್ಆರ್ಟಿಸಿ ಸಾರಿಗೆ ಬಸ್ ಹಾಗೂ ಮಾರುತಿ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದು, ನಾಲ್ಕು ಮಂದಿ ಗಾಯಗೊಂಡಿದ್ದಾರೆ.
ಅರಸೀಕೆರೆ ತಾಲ್ಲೂಕು ದೇವರಸನಹಳ್ಳಿ ಬಳಿ ತಡರಾತ್ರಿ 1:30ರ ಸುಮಾರಿಗೆ ಅಪಘಾತ ಸಂಭವಿಸಿದೆ.
ಮುಜೀಬಾ(53), ಮಹಮದ್ ಸಾಧಿಖ್(22), ಮುಷ್ಕಾನ್(19) ಮೃತರು.
ತುಮಕೂರು ಜಿಲ್ಲೆ ಮಧುಗಿರಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ. ಗಾಯಾಳುಗಳಾದ ಶಾಲಿನ್ ಭಾನು, ಇಮ್ರಾನ್ ಅಹಮದ್, ಶಾಲಿನ್ ತಾಜ್, ಮೊಹಮ್ಮದ್ ಶಾಲಿನ್ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಸಾಗಿಸಲಾಗಿದೆ.