ಬೆಂಗಳೂರು: ದೈಹಿಕವಾಗಿ ಅಸಮರ್ಥಗೊಂಡ ಅಧಿಕಾರಿಗಳು ಮತ್ತು ನೌಕರರಿಗೆ ಸ್ವಯಂ ನಿವೃತ್ತಿ ಯೋಜನೆಯನ್ನು ಕೆಎಸ್ಆರ್ಟಿಸಿ ಪ್ರಕಟಿಸಿದೆ.
ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ, ಆಡಳಿತಾತ್ಮಕ ಕಾರಣದಿಂದ ಮತ್ತು ನೌಕರರ ಹಿತದೃಷ್ಟಿಯಿಂದ ಈ ಯೋಜನೆ ಘೋಷಿಸಲಾಗಿದೆ ಎಂದು ನಿಗಮ ಹೇಳಿದೆ.
ಸ್ವಯಂ ನಿವೃತ್ತಿ ತೆಗೆದುಕೊಳ್ಳುವವರಿಗೆ ಆಕರ್ಷಣೀಯ ಪರಿಹಾರವೂ ಸಿಗಲಿದೆ. ಸಂಬಂಧಪಟ್ಟ ನೌಕರರು ಈ ಕುರಿತು ಅರ್ಜಿ ಸಲ್ಲಿಸಬೇಕು ಎಂದು ಮಂಗಳವಾರ ಸುತ್ತೋಲೆ ಹೊರಡಿಸಿರುವ ನಿಗಮವು, ಈ ಅರ್ಜಿಗಳನ್ನು ಪರಿಶೀಲಿಸಿ ಅಂಗೀಕರಿಸಲು ಸಮಿತಿಯನ್ನೂ ರಚಿಸಿದೆ.