‘ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಅವರಿಗೆ ದೇವಸ್ಥಾನ ವ್ಯವಸ್ಥಾಪನ ಮಂಡಳಿ ಅಧ್ಯಕ್ಷ ನಿತ್ಯಾನಂದ, ಸದಸ್ಯರಾದ ಗುರುಪ್ರಸಾದ್, ಪ್ರಸನ್ನ ಅವರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ. ಸ್ವಾಮೀಜಿ ಮತ್ತು ಮಠದ ಗೌರವಕ್ಕೆ ಧಕ್ಕೆ ತರುವ ಹಾಗೆ ನಡೆದುಕೊಳ್ಳುತ್ತಿದ್ದಾರೆ’ ಎಂದು ವೇದಿಕೆ ಅಧ್ಯಕ್ಷ ಜೆ.ಎಚ್.ಅನಿಲ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ದೂರಿದರು.