ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಸಾದ ಸೇವಿಸಿ ಸಾವು ಪ್ರಕರಣ: ‘ಮುನ್ನೆಚ್ಚರಿಕೆ ಕ್ರಮಕ್ಕೆ ಮಾರ್ಗಸೂಚಿ’ –ಸಿಎಂ

ಸುಳ್ವಾಡಿ ದುರಂತ ಬೆನ್ನಲ್ಲೇ ಚಿಂತಾಮಣಿಯಲ್ಲಿ ಅವಘಡ
Last Updated 26 ಜನವರಿ 2019, 13:45 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ:ಜಿಲ್ಲೆಯ ಚಿಂತಾಮಣಿಯಲ್ಲಿರುವ ದೇವಾಲಯದಲ್ಲಿ ಪ್ರಸಾದ ಸ್ವೀಕರಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಮರಣೋತ್ತರ ಪರೀಕ್ಷೆಯ ವರದಿ ನಿರೀಕ್ಷಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು.

ಪದೇ ಪದೇ ಇಂತಹ ದುರಂತಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಸರ್ಕಾರ ಕೆಲವು ಮಾರ್ಗಸೂಚಿ ಹೊರಡಿಸುವ ಅಗತ್ಯವಿದೆ ಎಂಬುದು ನನ್ನ ಅಭಿಪ್ರಾಯ. ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸುಳ್ವಾಡಿ ದುರಂತಕ್ಕೆ ಸಂಬಂಧಿಸಿದ ಸುದ್ದಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT