ಹಾಸನಾಂಬೆಯ ದರ್ಶನಕ್ಕಾಗಿ ಇಲ್ಲಿಗೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ನನಗೆ ದೇವರ ಮೇಲೆ ಅತೀವ ನಂಬಿಕೆ ಇದೆ.ಆ ಕಾರಣಕ್ಕೆ ಪ್ರತಿವರ್ಷ ಇಲ್ಲಿಗೆ ಬರುತ್ತೇನೆ. ಕುಮಾರಸ್ವಾಮಿ ಅವರಿಗೆಇನ್ನೂ ಹೆಚ್ಚಿನ ಶಕ್ತಿ ಕೊಟ್ಟು ಸಿಕ್ಕಿರುವ ಮುಖ್ಯಮಂತ್ರಿ ಸ್ಥಾನವನ್ನು ಉಳಿಸುಎಂದು ಬೇಡಿಕೊಂಡಿದ್ದೇನೆ. ಹಾಗೆಯೇ ನಾಡಿನ ಜನರಿಗೆ ಸುಖ ಶಾಂತಿ ಸಿಗಲಿ.ರೈತರ ಸಂಕಷ್ಡ ಬಗೆಹರಿಸು ಎಂದು ಪ್ರಾರ್ಥಿಸಿದ್ದೇನೆ’ ಎಂದರು.