ನಗರದಲ್ಲಿ ಮಂಗಳವಾರ ನಡೆದ ರೋಡ್ ಶೋದಲ್ಲಿ ಮಾತನಾಡಿದ ಅವರು, ‘ವಾರದ ಹಿಂದೆ ದೇವೇಗೌಡರು ಯಡಿಯೂರಪ್ಪ ಅವರ ಸರ್ಕಾರ ಬೀಳಿಸುವುದಿಲ್ಲ ಎನ್ನುತ್ತಾರೆ. ಅದು ನಿನ್ನೆ ಮೊನ್ನೆಯಿಂದ ಬದಲಾಗಿ ಹೋಗಿದೆ. ಸಿದ್ದರಾಮಯ್ಯ ಅವರ ಜತೆ ಕೈಮಿಲಾಯಿಸುವುದು, ಮತ್ತೆ ಮೈತ್ರಿ ಸರ್ಕಾರ ರಚಿಸಲು ಮುಂದಾಗಿದ್ದಾರೆ. ಈ ಹಿಂದೆ ಸಮ್ಮಿಶ್ರ ಸರ್ಕಾರ ಪತನಗೊಂಡಾಗ ಕಾಂಗ್ರೆಸ್, ಜೆಡಿಎಸ್ನವರು ಬೀದಿಯಲ್ಲಿ ವ್ಯಾಜ್ಯ ಮಾಡಿಕೊಂಡಿದ್ದು ಜನರೆಲ್ಲ ನೋಡಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರ ಕನಸು ನನಸಾಗುವುದಿಲ್ಲ’ ಎಂದು ತಿಳಿಸಿದರು.