ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಪರೇಷನ್ ಕಮಲ’ ಬಗ್ಗೆ ಕುಮಾರಸ್ವಾಮಿ ಮಾತು: ಬಿಜೆಪಿ ನಾಯಕರ ಆಕ್ಷೇಪ

ಕಲಾಪ 15 ನಿಮಿಷಗಳ ಕಾಲ ಮುಂದೂಡಿಕೆ
Last Updated 12 ಫೆಬ್ರುವರಿ 2019, 7:45 IST
ಅಕ್ಷರ ಗಾತ್ರ

ಬೆಂಗಳೂರು: 2014ರಲ್ಲಿಎಂಎಲ್‌ಸಿ ಸ್ಥಾನಕ್ಕಾಗಿ ₹25 ಕೋಟಿ ಆಮಿಷ ಒಡ್ಡಿದ್ದರು ಎಂದು ತಮ್ಮ ವಿರುದ್ಧ ಬಿ.ಎಸ್‌.ಯಡಿಯೂರಪ್ಪ ಮಾಡಿದ್ದ ಆರೋಪಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಆ ಪ್ರಕರಣವನ್ನು ಇಲ್ಲಿಯವರೆಗೆ ಯಾಕೆ ತನಿಖೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಅದು ನಮ್ಮ ಮನೆಯಲ್ಲಿ ನಡೆದಿದ್ದ ಘಟನೆ. ನಮ್ಮ ಪಕ್ಷದ ಕಾರ್ಯಕರೊಂದಿಗೆ ನಡೆಸಿದ್ದ ಮಾತುಕತೆ. ಆದರೆ ಯಡಿಯೂರಪ್ಪನವರು ಯಾವ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿದ್ದಾರೆ? ಆ ಪ್ರಕರಣವನ್ನು ಇದರೊಂದಿಗೆ ಹೋಲಿಸಿಕೊಳ್ಳುವುದು ಯಾಕೆ?ಎಂದರು.

ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ನಾಯಕರುಯಾವ ಪಕ್ಷದ ಕಾರ್ಯಕರ್ತರೇ ಆಗಿರಲಿ. ಆಮಿಷ ಒಡ್ಡುವುದು ತಪ್ಪಲ್ಲವೇ ಎಂದು ಪ್ರಶ್ನಿಸಿದರು.

ಚರ್ಚೆ ಮುಂದುವರಿದಂತೆ ಕುಮಾರಸ್ವಾಮಿ ಅವರು ಆಪರೇಷನ್‌ ಕಮಲದ ಬಗ್ಗೆ ಮಾತನಾಡಿದರು. ಈ ವೇಳೆ ಸಿಟ್ಟಿಗೆದ್ದ ಬಿಜೆಪಿ ನಾಯಕರು ಸಿಎಂಮಾತಿಗೆ ಅಡ್ಡಿಪಡಿಸಿದರು. ಗದ್ದಲ ನಿಯಂತ್ರಣಕ್ಕೆ ಬಾರದಿದ್ದಾಗಸಭಾಧ್ಯಕ್ಷರು ಕಲಾಪವನ್ನು 15 ನಿಮಿಷಗಳ ವರೆಗೆ ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT