ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೂಟೌಟ್‌ ಹೇಳಿಕೆ: ಊರು ತೊರೆದ 23 ಕುಟುಂಬ

Last Updated 26 ಡಿಸೆಂಬರ್ 2018, 17:47 IST
ಅಕ್ಷರ ಗಾತ್ರ

ಮಂಡ್ಯ: ಜೆಡಿಎಸ್‌ ಮುಖಂಡ ಪ್ರಕಾಶ್‌ ಅವರ ಕೊಲೆ ನಡೆದ ದಿನ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ನೀಡಿದ ಶೂಟೌಟ್ ಹೇಳಿಕೆಗೆ ತೊಪ್ಪನಹಳ್ಳಿ ಗ್ರಾಮಸ್ಥರು ಭಯಭೀತರಾಗಿದ್ದು, 23 ಕುಟುಂಬಗಳು ಊರು ತೊರೆದಿವೆ.

ಗ್ರಾಮ ಈಗಲೂ ಬೂದಿ ಮುಚ್ಚಿದ ಕೆಂಡದಂತಿದೆ. ಪೊಲೀಸ್‌ ಸಿಬ್ಬಂದಿ ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ. ನಿಷೇಧಾಜ್ಞೆ ಕಾರಣ ಬಂದ್‌ ಪರಿಸ್ಥಿತಿ ನಿರ್ಮಾಣವಾಗಿದೆ.

ಕುಟುಂಬಗಳು ಊರು ತೊರೆಯಲು ಮುಖ್ಯಮಂತ್ರಿಗಳ ಶೂಟೌಟ್‌ ಹೇಳಿಕೆಯೇ ಕಾರಣ ಎಂದು ಮೂಲಗಳು ತಿಳಿಸಿವೆ.

‘ಗ್ರಾಮದ ಜನರು ಭಯಭೀತರಾಗಿರುವುದು ನಿಜ, ಆದರೆ ಊರು ತೊರೆದಿರುವ ವಿಚಾರ ತಿಳಿದಿಲ್ಲ. ಆರೋಪಿಗಳ ಬಂಧನ ಕುರಿತು ಗುರುವಾರ ಮಾಹಿತಿ ನೀಡುತ್ತೇನೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಶಿವಪ್ರಕಾಶ್‌ ದೇವರಾಜ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT