<p><strong>ಚಿಕ್ಕಮಗಳೂರು:</strong> ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಚೆನ್ನೈಗೆ ಕರೆದೊಯ್ಯಲಾಗುವುದು ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.</p>.<p>ಶೃಂಗೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸ್ವಾಮೀಜಿ ಆರೋಗ್ಯದಲ್ಲಿ ಚಿಕ್ಕಪುಟ್ಟ ಏರುಪೇರಿಗೆ ಸಂಬಂಧಿಸಿದಂತೆ ತಜ್ಞ ವೈದ್ಯರು ಪರೀಕ್ಷಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಚೆನ್ನೈ ಕರೆದೊಯ್ಯಲು ನಿರ್ಧರಿಸಿದ್ದಾರೆ ಎಂದು ಹೇಳಿದರು.</p>.<p>ಎಲ್ಲ ವ್ಯವಸ್ಥೆಗಳನ್ನು ಸರ್ಕಾರದ ವೆಚ್ಚದಲ್ಲಿ ಮಾಡಲಾಗುವುದು. ಪ್ರತಿ ಕ್ಷಣದ ಮಾಹಿತಿ ಪಡೆದು ವ್ಯವಸ್ಥೆ ಮಾಡುವಂತೆ ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ ಎಂದು ಪ್ರತಿಕ್ರಿಯಿಸಿದರು.</p>.<p><strong>***</strong></p>.<p><strong>ಐ ಕ್ಯಾಟ್ ಏರ್ ಆಂಬುಲೆನ್ಸ್ ನಲ್ಲಿ ಚೆನ್ನೈಗೆ ಸ್ವಾಮೀಜಿ<br />ತುಮಕೂರು: </strong>ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ಮತ್ತಷ್ಟು ಸುಧಾರಣೆಗೆ ಚೆನ್ನೈನ ಡಾ. ರೇಲಾ ಇಂಟರ್ ನ್ಯಾಷನಲ್ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್ಗೆಕರೆದುಕೊಂಡು ಹೋಗಲಾಗುವುದು.</p>.<p>ಮಠದಿಂದ ಬೆಳಿಗ್ಗೆ 10.30 ಕ್ಕೆ ಸ್ವಾಮೀಜಿ ಹೊರಟಿದ್ದು, ಬೆಂಗಳೂರಿನ ಎಚ್ಎಎಲ್ವಿಮಾನ ನಿಲ್ದಾಣದಿಂದ <strong>ಐ ಕ್ಯಾಟ್ ಏರ್ ಅಂಬುಲೆನ್ಸ್</strong>ನಲ್ಲಿ ಮಧ್ಯಾಹ್ನ 12.30ಕ್ಕೆ ತೆರಳಲಿದ್ದಾರೆ.</p>.<p>ಸ್ವಾಮೀಜಿ ಅವರೊಂದಿಗೆ ಸಿದ್ಧಗಂಗಾ ಆಸ್ಪತ್ರೆಯ ಡಾ. ಪರಮೇಶ್, ಸ್ವಾಮೀಜಿ ಆರೈಕೆದಾರ ಮಲ್ಲಾರಾಧ್ಯ ಅವರು ಏರ್ ಅಂಬುಲೆನ್ಸ್ನಲ್ಲಿ ತೆರಳಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಚೆನ್ನೈಗೆ ಕರೆದೊಯ್ಯಲಾಗುವುದು ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.</p>.<p>ಶೃಂಗೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸ್ವಾಮೀಜಿ ಆರೋಗ್ಯದಲ್ಲಿ ಚಿಕ್ಕಪುಟ್ಟ ಏರುಪೇರಿಗೆ ಸಂಬಂಧಿಸಿದಂತೆ ತಜ್ಞ ವೈದ್ಯರು ಪರೀಕ್ಷಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಚೆನ್ನೈ ಕರೆದೊಯ್ಯಲು ನಿರ್ಧರಿಸಿದ್ದಾರೆ ಎಂದು ಹೇಳಿದರು.</p>.<p>ಎಲ್ಲ ವ್ಯವಸ್ಥೆಗಳನ್ನು ಸರ್ಕಾರದ ವೆಚ್ಚದಲ್ಲಿ ಮಾಡಲಾಗುವುದು. ಪ್ರತಿ ಕ್ಷಣದ ಮಾಹಿತಿ ಪಡೆದು ವ್ಯವಸ್ಥೆ ಮಾಡುವಂತೆ ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ ಎಂದು ಪ್ರತಿಕ್ರಿಯಿಸಿದರು.</p>.<p><strong>***</strong></p>.<p><strong>ಐ ಕ್ಯಾಟ್ ಏರ್ ಆಂಬುಲೆನ್ಸ್ ನಲ್ಲಿ ಚೆನ್ನೈಗೆ ಸ್ವಾಮೀಜಿ<br />ತುಮಕೂರು: </strong>ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ಮತ್ತಷ್ಟು ಸುಧಾರಣೆಗೆ ಚೆನ್ನೈನ ಡಾ. ರೇಲಾ ಇಂಟರ್ ನ್ಯಾಷನಲ್ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್ಗೆಕರೆದುಕೊಂಡು ಹೋಗಲಾಗುವುದು.</p>.<p>ಮಠದಿಂದ ಬೆಳಿಗ್ಗೆ 10.30 ಕ್ಕೆ ಸ್ವಾಮೀಜಿ ಹೊರಟಿದ್ದು, ಬೆಂಗಳೂರಿನ ಎಚ್ಎಎಲ್ವಿಮಾನ ನಿಲ್ದಾಣದಿಂದ <strong>ಐ ಕ್ಯಾಟ್ ಏರ್ ಅಂಬುಲೆನ್ಸ್</strong>ನಲ್ಲಿ ಮಧ್ಯಾಹ್ನ 12.30ಕ್ಕೆ ತೆರಳಲಿದ್ದಾರೆ.</p>.<p>ಸ್ವಾಮೀಜಿ ಅವರೊಂದಿಗೆ ಸಿದ್ಧಗಂಗಾ ಆಸ್ಪತ್ರೆಯ ಡಾ. ಪರಮೇಶ್, ಸ್ವಾಮೀಜಿ ಆರೈಕೆದಾರ ಮಲ್ಲಾರಾಧ್ಯ ಅವರು ಏರ್ ಅಂಬುಲೆನ್ಸ್ನಲ್ಲಿ ತೆರಳಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>