ಕುಮಾರಸ್ವಾಮಿ ಅವರಲ್ಲಿ ಅತೃಪ್ತಿ ಕಾಡುತ್ತಿದೆ. ಅಸಮಾಧಾನ ಹಾಗೂ ಹತಾಶೆಯಿಂದ ಹೀಗೆ ಮಾತನಾಡುತ್ತಿದ್ದಾರೆ. ನೆರೆ ಪರಿಹಾರವನ್ನು ಮತ್ತೊಂದು ಕಂತಿನಲ್ಲಿ ನೀಡುವುದಾಗಿ ಕೇಂದ್ರ ಸರ್ಕಾರವೇ ಹೇಳಿದೆ. ಪರಿಹಾರ ಹಣದ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆಯೇ ಹೊರತು ಕುಮಾರಸ್ವಾಮಿ ಅಲ್ಲ. ಇಂತಹ ಬೇಜವಾಬ್ದಾರಿ ಹೇಳಿಕೆಯನ್ನು ಅವರು ನೀಡಬಾರದು ಎಂದು ಕಿಡಿಕಾರಿದರು.