ಬೆಂಗಳೂರು: ಕಾಂಗ್ರೆಸ್ನಿಂದ ಬಿಜೆಪಿಗೆ ಜಿಗಿದು ಉಪಚುನಾವಣೆಯಲ್ಲಿ ಗೆದ್ದ ಶಾಸಕ ಮಹೇಶ ಕುಮಠಳ್ಳಿ ಅವರನ್ನು ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಕುಮಠಳ್ಳಿ ಅವರಿಗೆ ಈ ಹಿಂದೆ ಎಂಎಸ್ಐಎಲ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ, ಅದು ತಮಗೆ ತಕ್ಕದಲ್ಲದ ಸ್ಥಾನ ಎಂದು ನಿರಾಕರಿಸಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಎಲ್ಲ ನೇಮಕಾತಿಗಳಿಗೆ ತಡೆ ನೀಡಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.