ಚಿತ್ರದುರ್ಗ: ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮಂದಿರ ನಿರ್ಮಾಣ ವಿಳಂಬ ಸಲ್ಲದು. ಜ.30ರಂದು ತೀರ್ಮಾನ ಹೊರಬೀಳಲಿದೆ. 2025ಕ್ಕೆ ಮಂದಿರ ನಿರ್ಮಾಣವಾಗಲಿದೆ ಎಂಬ ಆರ್ಎಸ್ಎಸ್ ಮುಖ್ಯಸ್ಥ ಭಯ್ಯಾಜಿ ಜೋಶಿ ಅವರ ಹೇಳಿಕೆ ಬಗ್ಗೆ ಮಾಹಿತಿ ಇಲ್ಲ’ ಎಂದರು.