ದಕ್ಷಿಣ ಭಾರತದ ಕುಂಭಮೇಳ ಕ್ಷೇತ್ರವೆಂದೇ ಇದು ಪ್ರಸಿದ್ಧಿ ಪಡೆದಿದ್ದು, ಧಾರ್ಮಿಕ ಸಭೆಗಳು ಹಾಗೂ ಯಜ್ಞ ಯಾಗಾದಿಗಳು ನಡೆಯಲಿವೆ. 1989ರಿಂದ ಪ್ರತಿ ಮೂರು ವರ್ಷಗಳಿಗೊಮ್ಮೆ ಆಯೋಜಿಸುತ್ತಿದ್ದು, ಈ ಬಾರಿ ನಡೆಯುತ್ತಿರುವುದು 11ನೆಯದು. ಮೂರನೇ ದಿನ ಮಹೋದಯ ಪುಣ್ಯಕಾಲದ ಮಹಾಮಾಘ ಸ್ನಾನವಿರುವುದರಿಂದ ಮಠಾಧೀಶರು, ಸಾಧು ಸಂತರು ಸೇರಿದಂತೆ ಲಕ್ಷಾಂತರ ಭಕ್ತರು ಪಾಲ್ಗೊಳ್ಳಲಿದ್ದಾರೆ.