ಹುಬ್ಬಳ್ಳಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಶಾಸಕ ಜಗದೀಶ ಶೆಟ್ಟರ್, ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ತಮಗೆ ಮತ ಹಾಕುವಂತೆ ಲಿಂಗಾಯತರನ್ನು ಒತ್ತಾಯಿಸಿದ್ದರು. ಆದರೆ, ಈಗ ಕುಂದಗೋಳದಲ್ಲಿ ಸಹ ಅನ್ಯ ಪಕ್ಷಗಳಿಂದ ಲಿಂಗಾಯತ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಈಗ ಯಾರ ಪರ ಮತ ಕೇಳುತ್ತಾರೆ ಎಂದು ಪ್ರಶ್ನಿಸಿದರು.