ಕಲಬುರ್ಗಿ: ‘ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಕರೆ ಬಂದಿದ್ದಕ್ಕೆ ಪತ್ರಿಕಾಗೋಷ್ಠಿ ನಡೆಸಿ ಖಂಡಿಸಿರುವ ಜಿಲ್ಲಾ ಪಂಚಾಯಿತಿ ಸದಸ್ಯ ಅರುಣಕುಮಾರ ಪಾಟೀಲ ಅವರು ತಮ್ಮ ತಂದೆ ಶಾಸಕರಾಗಿರುವ ಕ್ಷೇತ್ರದಲ್ಲಿ ಖರ್ಗೆ ಅವರಿಗೆ ಕಡಿಮೆ ಮತಗಳನ್ನೇಕೆ ತಂದುಕೊಟ್ಟರು’ ಎಂದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಅವರ ಬೆಂಬಲಿಗ, ಕಲ್ಯಾಣ ಕರ್ನಾಟಕ ಕೋಲಿ ಸಮಾಜದ ಉಪಾಧ್ಯಕ್ಷ ಲಚ್ಚಪ್ಪ ಜಮಾದಾರ ಪ್ರಶ್ನಿಸಿದರು.