‘ಹಿರಿಯ ವಕೀಲರ ಜೊತೆಯಲ್ಲಿ ಅಕ್ರಮ ಸಂಬಂಧವಿಟ್ಟುಕೊಂಡಿದ್ದಾಳೆ’ ಎಂದು ನವೀನಾ ಮೇಲೆ ಅನುಮಾನಗೊಂಡಿದ್ದ ರಾಜಪ್ಪ, ಅವರ ಜೊತೆಗೆ ಜಗಳ ಮಾಡಲಾರಂಭಿಸಿದ್ದ. ‘ನವೀನಾ ನನ್ನನ್ನು ಮದುವೆಯಾಗಲು ನಿರಾಕರಿಸಬಹುದು’ ಎಂದು ತಿಳಿದಿದ್ದ ಅಪರಾಧಿ, ‘ಆಕೆ ನನ್ನನ್ನು ಬಿಟ್ಟು ಬೇರೆ ಯಾರನ್ನೂ ಮದುವೆಯಾಗಬಾರದು’ ಎಂದು ನಿರ್ಧರಿಸಿ ಕೊಲೆ ಮಾಡಿದ್ದ. ಆ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.