‘ಬರ ಹಾಗೂ ಬಿಸಿಲಿನ ತಾಪದಿಂದ ಪ್ರಾಣಿಗಳು ಕುಡಿಯಲು ನೀರಿಲ್ಲದೆ ಪರದಾಡುತ್ತಿವೆ. ಕೆಲ ಪ್ರಾಣಿಗಳು ಆಹಾರ, ನೀರು ಅರಸಿ ಪಟ್ಟಣಕ್ಕೆ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಕೆರೆ ಹೂಳು ತೆಗೆದು ಸ್ವಚ್ಛಗೊಳಿಸಲು ಮುಂದಾಗಿದ್ದೇನೆ. ಇದಕ್ಕೆ ನದಾಫ್ ಕುಟುಂಬಸ್ಥರು, ಸುತ್ತಮುತ್ತಲಿನ ಹೊಲಗಳ ರೈತರು ಸಹಕಾರ ನೀಡಿದ್ದಾರೆ’ ಎಂದು ನಾಗರಾಜು ‘ಪ್ರಜಾವಾಣಿ’ಗೆ ತಿಳಿಸಿದರು.