ಮೊದಲಿಗೆ ಗೋಪಿ, ನಂತರ ಅರ್ಜುನ, ದುರ್ಗಾಪರಮೇಶ್ವರಿ ಹಾಗೂ ವಿಕ್ರಂ ಆನೆಗಳು ಸೊಂಡಲಿನಿಂದ ತಳ್ಳಿ, ಮುಂದಲೆ ಮತ್ತು ದಂತದಿಂದ ನೂಕಿದರೂ ಲಕ್ಷ್ಮಿ ಮಾತು ಕೇಳಲಿಲ್ಲ. ‘ಬೇಕಾದರೆ ನೀವೆಲ್ಲ ಹೋಗಿ, ನಾನು ಬರಲ್ಲ...’ಎಂದು ತನ್ನ ನಿರ್ಧಾರಕ್ಕೆ ಗಟ್ಟಿಯಾಗಿ ಅಂಟಿಕೊಂಟಿತು.ಮಾವುತರು, ಸಹಾಯಕರು, ಅರಣ್ಯ ಸಿಬ್ಬಂದಿಯೂ ಹೈರಾಣಾದರು.