<p><strong>ಬೆಂಗಳೂರು:</strong> ತೋಟಗಾರಿಕೆ ಇಲಾಖೆ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಲಾಲ್ಬಾಗ್ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಶುಕ್ರವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದಗಂಗಾಶ್ರೀಗಳಿಗೆ ಭಾರತ ರತ್ನ ನೀಡುವಂತೆ ಮತ್ತೊಮ್ಮೆ ಪ್ರಧಾನಿ, ರಾಷ್ಟ್ರಪತಿಗಳಿಗೆ ಮನವಿ ಮಾಡುತ್ತೇನೆ. ಇಂದು ಮಧ್ಯಾಹ್ನ ಮಠಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತೇನೆ. ದೇವರ ದಯೆಯಿಂದ ಅವರು ಬೇಗ ಗುಣಮುಖರಾಗಲಿ, ಬಹಳ ವರ್ಷಗಳು ನಮ್ಮ ಜೊತೆಇರಲಿ’ ಎಂದು ಹೇಳಿದರು.</p>.<p>ಗುರುಗ್ರಾಮದಲ್ಲಿರುವ ರಾಜ್ಯ ಬಿಜೆಪಿ ಶಾಸಕರುನಾಳೆ ವಾಪಸ್ ಬರುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅಯ್ಯೋ ಪಾಪ ಅವರೆಲ್ಲ ರೆಸ್ಟ್ಗೆ ಹೋಗಿದ್ದಾರೆ. ಈಗಲಾದರೂ ತಮ್ಮ ಕ್ಷೇತ್ರಗಳತ್ತ ಮುಖ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲಿ' ಎಂದು ವ್ಯಂಗ್ಯವಾಡಿದರು.</p>.<p>ಜ.27ರವರೆಗೆ ಸಾರ್ವಜನಿಕರಿಗೆ ಫಲಪುಷ್ಪ ಪ್ರದರ್ಶನ ಇರಲಿದೆ.</p>.<p>ಸಹಸ್ರಾರು ಹೂಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಬದುಕಿನ ಪ್ರಮುಖ ಘಟನೆಗಳು ತೆರೆದುಕೊಳ್ಳಲಿವೆ. ಪ್ರದರ್ಶನಕ್ಕೆ ಭೇಟಿ ನೀಡುವ ಸಸ್ಯ ಪ್ರೇಮಿಗಳಿಗೆ ಮತ್ತು ತೋಟಗಾರಿಕೆ ಆಸಕ್ತರಿಗಾಗಿ ಔಷಧಿ, ಆಲಂಕಾರಿಕ ಸಸ್ಯಗಳು ಹಾಗೂ ಬೊನ್ಸಾಯ್ ಗಿಡಗಳು, ತೋಟಗಾರಿಕೆ ಸಲಕರಣೆಗಳು ದೊರೆಯುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ತೋಟಗಾರಿಕೆ ಇಲಾಖೆ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಲಾಲ್ಬಾಗ್ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಶುಕ್ರವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದಗಂಗಾಶ್ರೀಗಳಿಗೆ ಭಾರತ ರತ್ನ ನೀಡುವಂತೆ ಮತ್ತೊಮ್ಮೆ ಪ್ರಧಾನಿ, ರಾಷ್ಟ್ರಪತಿಗಳಿಗೆ ಮನವಿ ಮಾಡುತ್ತೇನೆ. ಇಂದು ಮಧ್ಯಾಹ್ನ ಮಠಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತೇನೆ. ದೇವರ ದಯೆಯಿಂದ ಅವರು ಬೇಗ ಗುಣಮುಖರಾಗಲಿ, ಬಹಳ ವರ್ಷಗಳು ನಮ್ಮ ಜೊತೆಇರಲಿ’ ಎಂದು ಹೇಳಿದರು.</p>.<p>ಗುರುಗ್ರಾಮದಲ್ಲಿರುವ ರಾಜ್ಯ ಬಿಜೆಪಿ ಶಾಸಕರುನಾಳೆ ವಾಪಸ್ ಬರುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅಯ್ಯೋ ಪಾಪ ಅವರೆಲ್ಲ ರೆಸ್ಟ್ಗೆ ಹೋಗಿದ್ದಾರೆ. ಈಗಲಾದರೂ ತಮ್ಮ ಕ್ಷೇತ್ರಗಳತ್ತ ಮುಖ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲಿ' ಎಂದು ವ್ಯಂಗ್ಯವಾಡಿದರು.</p>.<p>ಜ.27ರವರೆಗೆ ಸಾರ್ವಜನಿಕರಿಗೆ ಫಲಪುಷ್ಪ ಪ್ರದರ್ಶನ ಇರಲಿದೆ.</p>.<p>ಸಹಸ್ರಾರು ಹೂಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಬದುಕಿನ ಪ್ರಮುಖ ಘಟನೆಗಳು ತೆರೆದುಕೊಳ್ಳಲಿವೆ. ಪ್ರದರ್ಶನಕ್ಕೆ ಭೇಟಿ ನೀಡುವ ಸಸ್ಯ ಪ್ರೇಮಿಗಳಿಗೆ ಮತ್ತು ತೋಟಗಾರಿಕೆ ಆಸಕ್ತರಿಗಾಗಿ ಔಷಧಿ, ಆಲಂಕಾರಿಕ ಸಸ್ಯಗಳು ಹಾಗೂ ಬೊನ್ಸಾಯ್ ಗಿಡಗಳು, ತೋಟಗಾರಿಕೆ ಸಲಕರಣೆಗಳು ದೊರೆಯುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>