ತೋಟಗಾರಿಕೆ ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾ ಸಂಘ ಆಯೋಜಿಸಿದ್ದ ಈ ಬಾರಿಯ ಫಲಪುಷ್ಪ ಪ್ರದರ್ಶನವನ್ನು ಸ್ವಾಮಿ ವಿವೇಕಾನಂದರಿಗೆ ಅರ್ಪಿಸಲಾಯಿತು. ಲಾಲ್ಬಾಗ್ ಗಾಜಿನ ಮನೆಯ ಹೃದಯ ಭಾಗದಲ್ಲಿಸಿದ್ಧಪಡಿಸಲಾಗಿದ್ದ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದರ ಸ್ಮಾರಕದ ಮಾದರಿ ಫಲಪುಷ್ಪ ಪ್ರದರ್ಶನದ ಕೇಂದ್ರಬಿಂದುವಾಗಿತ್ತು.75 ಸಾವಿರ ಕೆಂಪು, ಬಿಳಿ, ಹಳದಿ ಗುಲಾಬಿ, 75 ಸಾವಿರ ಸೇವಂತಿಗೆ ಹಾಗೂ 3 ಸಾವಿರ ವಿವಿಧ ಎಲೆಗಳನ್ನು ಬಳಸಿ ನಿರ್ಮಿಸಲಾಗಿದ್ದ ಸ್ಮಾರಕವನ್ನು ಜನ ಕುತೂಹಲದಿಂದ ವೀಕ್ಷಿಸಿದರು.