ಅಂಚೆ ಕಲಾಶಿಕ್ಷಣ ಸಂಸ್ಥೆಯ ನಿರ್ದೇಶಕರಾಗಿ, ಉಡುಪಿಯ ಆರ್ಟ್ಸ್ ಫೋರಮ್ ಆಜೀವ ಸದಸ್ಯರಾಗಿ, ಉತ್ತರ ಕನ್ನಡ ಜಿಲ್ಲೆ ಚಿತ್ರಕಲಾ ಪರಿಷತ್ ಸ್ಥಾಪಕ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಕಲಾ ಸಾಧನೆಗೆ ಎಂ.ಟಿ.ವಿ. ಆಚಾರ್ಯ ರಾಷ್ಟ್ರೀಯ ಪ್ರಶಸ್ತಿ, ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ, ಪಿ.ಲಂಕೇಶ ಪ್ರಶಸ್ತಿ, ರಾಷ್ಟ್ರಭೂಷಣ ಪ್ರಶಸ್ತಿ, ಡಾ.ರಾಜಕುಮಾರ ಪ್ರಶಸ್ತಿ, ಕಲಾಶ್ರೀ ಪ್ರಶಸ್ತಿ, ಉತ್ತಮ ಕಲಾ ಶಿಕ್ಷಕ ಪ್ರಶಸ್ತಿ, ಅಖಿಲ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿವೆ.