‘ಮಧ್ಯವರ್ತಿಗಳುನಮಗೆ ನೀರಾವರಿ ಜಮೀನು ತೋರಿಸಿದ್ದರು. ಆದರೆ, ಕೃಷಿಗೆ ಯೋಗ್ಯವಲ್ಲದ ಬಂಡೆಗಳಿಂದ ಕೂಡಿರುವ ಜಮೀನನ್ನು ನೋಂದಣಿ ಮಾಡಿಸಿದ್ದಾರೆ. ನಿಗಮ ಪಾವತಿಸಿರುವ ಹಣದಲ್ಲಿ ನಾವು ₹3 ಲಕ್ಷ ಮರುಪಾವತಿ ಮಾಡಬೇಕು.ಎಕರೆಗೆ ₹1 ಲಕ್ಷ ಸಹ ಬೆಲೆ ಬಾಳದ ಭೂಮಿ ಪಡೆದು ₹3 ಲಕ್ಷ ಸಾಲ ಹೊತ್ತುಕೊಳ್ಳುವುದು ಬೇಕಾಗಿಲ್ಲ. ನಮಗೆ ತೋರಿಸಿದ್ದ ನೀರಾವರಿ ಜಮೀನನ್ನೇ ಕೊಡಿಸಬೇಕು’ ಎಂದು ಫಲಾನುಭವಿಗಳು ಜಿಲ್ಲಾಧಿಕಾರಿ ಮೊರೆ ಹೋಗಿದ್ದರು.