ಕಾಯ್ದೆಯ ಪ್ರಕರಣ 109ಕ್ಕೆ ತಿದ್ದುಪಡಿ ತರಲಾಗಿದ್ದು, ಅದರ ಪ್ರಕಾರ ಯಾವುದೇ ವ್ಯಕ್ತಿ ಕೈಗಾರಿಕೆ ಸ್ಥಾಪಿಸಲು ಸರ್ಕಾರದಿಂದ ಜಮೀನು ಪಡೆದು ಏಳು ವರ್ಷಗಳಲ್ಲಿ ಬಳಕೆ ಮಾಡದೆ ಉಳಿಸಿಕೊಂಡಿದ್ದರೆ ಅಥವಾ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಮುಚ್ಚಿಸಿದರೆ, ಅಂಥ ಭೂಮಿಯನ್ನು ಸಂಬಂಧಿಸಿದ ಉದ್ಯಮಿ ಏಳು ವರ್ಷಗಳ ಬಳಿಕ ಸರ್ಕಾರದ ಅನುಮತಿ ಪಡೆದು ತಾವು ಯಾವ ಉದ್ದೇಶಕ್ಕೆ ಜಮೀನು ಪಡೆದಿದ್ದರೊ ಅದೇ ಉದ್ದೇಶಕ್ಕೆ ಇನ್ನೊಬ್ಬರಿಗೆ ಮಾರಾಟ ಮಾಡಬಹುದಾಗಿದೆ.