ಭೂಕುಸಿತಗೊಂಡಿರುವ ಪ್ರದೇಶಕ್ಕೆ ರೈಲ್ವೆ ಹಿರಿಯ ಅಧಿಕಾರಿಗಳು ಹಾಗೂ ಎಂಜಿನಿಯರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ನಡೆಯುತ್ತಿದ್ದು ಈ ಭಾಗದಲ್ಲಿರುವ ರೈಲು ಹಳಿಗಳ ಕೆಳಗೆ ಸುರಂಗ ಮಾರ್ಗ ಕೊರೆದಿರುವ ಕಾರಣ ಅನೇಕ ಬಾರಿ ಭೂಮಿಯ ಮಣ್ಣು ಜರುಗಿದ್ದು, ರೈಲುಗಳು ಆಗಾಗ ಪ್ರಯಾಣವನ್ನು ಸ್ಥಗಿತಗೊಳಿಸಬೇಕಾಗುತ್ತಿದೆ. ರೈಲ್ವೆ ಅಧಿಕಾರಿಗಳು ಸಮಸ್ಯೆ ಪರಿಹರಿಸಿ ಆಗುತ್ತಿರುವ ಅವಘಡವನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.