ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌಡರ ಜತೆ ರಾಜಿಯಾಗಿ ಕಾಂಗ್ರೆಸ್‌ಗೆ ಟಿಎಂಸಿ ಸಲಹೆ

Last Updated 27 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ, ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ಅವರ ಜತೆ ರಾಜಿ ಮಾಡಿಕೊಳ್ಳಬೇಕು ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲಹೆ ಮಾಡಿದ್ದಾರೆ.

ಕರ್ನಾಟಕದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ವೇಳೆ ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಡೆಯನ್ನು ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ಇತರ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಅವರು ‘ಒಳ್ಳೆಯ ವ್ಯಕ್ತಿ’ ಎಂದು ಬಣ್ಣಿಸಿರುವ ಮಮತಾ, 1996ರಲ್ಲಿ ದೇವೇಗೌಡ ಅವರು ಪ್ರಧಾನಿ ಆದಾಗ ಕಾಂಗ್ರೆಸ್‌ ಬೆಂಬಲ ನೀಡಿದ್ದನ್ನು ನೆನಪಿಸಿದ್ದಾರೆ.

‘ಕರ್ನಾಟಕದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕೈಜೋಡಿಸಬೇಕು ಎನ್ನುವುದು ನನ್ನ ಹಾರೈಕೆ. ಉಳಿದಿದ್ದು ಕಾಂಗ್ರೆಸ್‌ಗೆ ಬಿಟ್ಟ ವಿಚಾರ’ ಎಂದು ಮಮತಾ ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ವಿರುದ್ಧ ತೃತೀಯ ರಂಗ ರೂಪಿಸುವ ಪ್ರಯತ್ನದ ಭಾಗವಾಗಿ ಬ್ಯಾನರ್ಜಿ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT