‘ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರು, ಪ್ಯಾರಾಮೆಡಿಕಲ್ ಸಿಬ್ಬಂದಿ, ಆರೋಗ್ಯ ಇಲಾಖೆ ನೌಕರರನ್ನು ಕರ್ನಾಟಕದಲ್ಲಿ ಮನೆ ಮಾಲೀಕರು ಖಾಲಿ ಮಾಡುವಂತೆ ಒತ್ತಾಯಿಸುತ್ತಿರುವ ಹತ್ತಾರು ದೂರುಗಳು ನಮಗೆ ಬಂದಿವೆ. ಇದು ಸಾರ್ವಜನಿಕ ಸೇವೆಯಲ್ಲಿರುವ ಕರ್ತವ್ಯಕ್ಕೆ ಅಡ್ಡಪಡಿಸಿದಂತೆ. ಕೊರೊನಾ ವೈರಸ್ ತಡೆಯಲು ರಾಜ್ಯದಲ್ಲಿ ಸಾಂಕ್ರಾಮಿಕ ಕಾಯಿಲೆ ನಿಯಂತ್ರಣಾ ಕಾಯ್ದೆ, ಸೋಂಕು ರೋಗಗಳ ಕಾಯ್ದೆ ಜಾರಿಯಲ್ಲಿದೆ. ಮನೆ ಖಾಲಿ ಮಾಡಿಸುವ ದೂರು ಕೇಳಿ ಬಂದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು,’ ಎಂದು ಜಿಲ್ಲಾಧಿಕಾರಿಗಳು, ಬಿಬಿಎಂಪಿ ಆಯುಕ್ತರು, ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.