ಅದು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸುವ ಕುರಿತ ಹೋರಾಟದ ದಿನಗಳು. ಹೋರಾಟ ತೀವ್ರಗೊಂಡಿತ್ತು. ಪ್ರತಿ ವರ್ಷ ಜನವರಿ 26 ಮತ್ತು ಆಗಸ್ಟ್ 15ರಂದು ಈದ್ಗಾ ಮೈದಾನದಲ್ಲಿ ಧ್ವಜ ಹಾರಿಸಲು ಸಿದ್ಧತೆ ನಡೆಯುತ್ತಿತ್ತು. ಆಗ ಪೊಲೀಸರು ಅನಂತಕುಮಾರ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಲು ಮುಂದಾಗಿದ್ದರು. ಆಗ ಭೂಗತರಾದ ಅನಂತ್, ಆದರ್ಶ ನಗರದಲ್ಲಿ ಗೆಳೆಯ ರಮೇಶ್ ಶೆಟ್ಟಿ ಅವರಿಗೆ ಸೇರಿದ ಅಪಾರ್ಟ್ಮೆಂಟ್ನಲ್ಲಿ ಐದಾರು ದಿನ ಉಳಿದುಕೊಂಡಿದ್ದರು.