ವಕೀಲರ ರಕ್ಷಣಾ ಕಾಯ್ದೆ: 12ರಂದ ಕೋರ್ಟ್ ಕಲಾಪದಿಂದ ಹೊರಗುಳಿಯಲು ವಕೀಲರ ನಿರ್ಧಾರ

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರಲು ಒತ್ತಾಯಿಸಿ ಇದೇ 12 ರಂದು ಕೋರ್ಟ್ ಕಲಾಪದಿಂದ ಹೊರಗುಳಿಯಲು ಬೆಂಗಳೂರು ವಕೀಲರ ಸಂಘ ನಿರ್ಧರಿಸಿದೆ.
ರಾಜ್ಯದಾದ್ಯಂತ ಎಲ್ಲ ವಕೀಲರ ಸಂಘಗಳೂ ಭಾರತೀಯ ವಕೀಲರ ಪರಿಷತ್ ನ ಈ ಕರೆಗೆ ಓಗೊಟ್ಟು ಕೋರ್ಟ್ ಕಲಾಪದಿಂದ ಹೊರಗುಳಿಯಬೇಕು ಎಂದೂ ಸಂಘ ಮನವಿ ಮಾಡಿದೆ.
ಈ ಕುರಿತಂತೆ ಸೋಮವಾರ ನಡೆದ ಸಂಘದ ಸರ್ವ ಸದಸ್ಯರ ತುರ್ತು ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ವಹಿಸಿದ್ದರು.
ಪ್ರಧಾನ ಕಾರ್ಯದರ್ಶಿ ಎ.ಎನ್.ಗಂಗಾಧರಯ್ಯ, ಖಜಾಂಚಿ ಶಿವಮೂರ್ತಿ ಮತ್ತು ಸದಸ್ಯರು ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.