ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕೀಲರ ರಕ್ಷಣಾ ಕಾಯ್ದೆ: 12ರಂದ ಕೋರ್ಟ್ ಕಲಾಪದಿಂದ ಹೊರಗುಳಿಯಲು ವಕೀಲರ ನಿರ್ಧಾರ

Last Updated 11 ಫೆಬ್ರುವರಿ 2019, 12:41 IST
ಅಕ್ಷರ ಗಾತ್ರ

ಬೆಂಗಳೂರು:ರಾಷ್ಟ್ರಮಟ್ಟದಲ್ಲಿ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರಲು ಒತ್ತಾಯಿಸಿ ಇದೇ 12 ರಂದು ಕೋರ್ಟ್ ಕಲಾಪದಿಂದ ಹೊರಗುಳಿಯಲು ಬೆಂಗಳೂರು ವಕೀಲರ ಸಂಘ ನಿರ್ಧರಿಸಿದೆ.

ರಾಜ್ಯದಾದ್ಯಂತ ಎಲ್ಲ ವಕೀಲರ ಸಂಘಗಳೂ ಭಾರತೀಯ ವಕೀಲರ ಪರಿಷತ್ ನ ಈ ಕರೆಗೆ ಓಗೊಟ್ಟು ಕೋರ್ಟ್ ಕಲಾಪದಿಂದ ಹೊರಗುಳಿಯಬೇಕು ಎಂದೂ ಸಂಘ ಮನವಿ ಮಾಡಿದೆ.

ಈ ಕುರಿತಂತೆ ಸೋಮವಾರ ನಡೆದ ಸಂಘದ ಸರ್ವ ಸದಸ್ಯರ ತುರ್ತು ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ವಹಿಸಿದ್ದರು.
ಪ್ರಧಾನ ಕಾರ್ಯದರ್ಶಿ ಎ.ಎನ್.ಗಂಗಾಧರಯ್ಯ, ಖಜಾಂಚಿ ಶಿವಮೂರ್ತಿ ಮತ್ತು ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT