ಬೆಂಗಳೂರು: ಸರ್ಕಾರಿ ಸಾರಿಗೆ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಮೇಲಿದ್ದಾಗ, ಕೋವಿಡ್–19ನಿಂದ ಮೃತಪಟ್ಟಲ್ಲಿ, ಅವರ ಕುಟುಂಬಕ್ಕೆ ₹30 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಘೋಷಿಸಿದ್ದಾರೆ.
‘ಸಾರಿಗೆ ಇಲಾಖೆಯಿಂದ ಈ ಪರಿಹಾರವನ್ನು ನೀಡಲಾಗುವುದು’ ಎಂದೂ ಅವರು ತಿಳಿಸಿದ್ದಾರೆ.
ನಾಳೆಯಿಂದ ಕೆಂಪು ವಲಯ ಮತ್ತು ಕಂಟೇನ್ಮೆಂಟ್ ವಲಯ ಹೊರತುಪಡಿಸಿ ಉಳಿದ ಕಡೆಗಳಲ್ಲಿ ಖಾಸಗಿ ಬಸ್ಸುಗಳು, ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರ ಆರಂಭಕ್ಕೆ ಮತ್ತು ಸಂಪೂರ್ಣ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಈ ನಿರ್ಧಾರದ ಬೆನ್ನಲ್ಲೇ ಸವದಿ ಅವರು ಪರಿಹಾರದ ಘೋಷಣೆ ಮಾಡಿದ್ದಾರೆ.