ಬಳ್ಳಾರಿ: 'ಜಿಲ್ಲಾ ಉಸ್ತುವಾರಿ ಹಂಚಿಕೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಜರಾತ್ ಮಾದರಿಯನ್ನು ಅನುಸರಿಸಿದ್ದಾರೆ' ಎಂದು ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪ್ರಧಾನಿ ಮೋದಿ, ಅಮಿತ್ ಶಾ ಗುಜರಾತ್ನಲ್ಲಿ ಸ್ಥಳೀಯರಿಗೆ ಸಚಿವ ಸ್ಥಾನ ನೀಡದೇ ಬೇರೆಯವರಿಗೆ ಅವಕಾಶ ನೀಡುವ ಮೂಲಕ ಅಭಿವೃದ್ಧಿಗೆ ನಾಂದಿ ಹಾಡಿದ್ದರು. ಈಗ ಕರ್ನಾಟಕ ರಾಜ್ಯದಲ್ಲಿ ಸಹ ಇದೇ ಪ್ರಯೋಗವನ್ನು ಯಡಿಯೂರಪ್ಪ ಅನುಸರಿಸಿದ್ದಾರೆ' ಎಂದರು.