‘ನಾಲ್ಕೂ ಸಂಸ್ಥೆಗಳ ಬಸ್ಗಳಲ್ಲಿಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿರುವ ಕಾರಣ ವರಮಾನ ಇಳಿಮುಖವಾಗಿದ್ದು, ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ವೆಚ್ಚ ಕಡಿಮೆ ಮಾಡುವ ನಿಟ್ಟಿನಲ್ಲಿ ಆಡಳಿತಾತ್ಮಕ ಕ್ರಮ ಕೈಗೊಳ್ಳಲಾಗಿದೆ.ಅನಗತ್ಯವಾಗಿದ್ದ ಹೊರಗುತ್ತಿಗೆ ಸಿಬ್ಬಂದಿ ಕಡಿಮೆ ಮಾಡಲಾಗುವುದು. ಗೃಹ ರಕ್ಷಕ ಸಿಬ್ಬಂದಿ ಬದಲಿಗೆ ಸಂಸ್ಥೆಗಳಲ್ಲಿನ ಆಸಕ್ತ ಸಿಬ್ಬಂದಿಯನ್ನೇ ಭದ್ರತಾ ಕೆಲಸಕ್ಕೆ ನಿಯೋಜಿಸಲಾಗುವುದು. ಮಾಜಿ ಸೈನಿಕರಿಗೆ ಪ್ರಥಮ ಆದ್ಯತೆ ನೀಡಲಾಗುವುದು’ ಎಂದು ಅವರು ವಿವರಿಸಿದ್ದಾರೆ.