<p><strong>ಹೊಸಪೇಟೆ:</strong> ‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಮುಸ್ಲಿಮರು ಹೆದರಬೇಕಿಲ್ಲ. ಅದರಿಂದ ಯಾರಿಗೂಯಾವುದೇ ತೊಂದರೆ ಆಗುವುದಿಲ್ಲ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.</p>.<p>ಭಾನುವಾರ ನಗರದಲ್ಲಿ ಸಿಎಎ ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮನಮೋಹನ್ ಸಿಂಗ್ ಅವರು ಪ್ರಧಾನಿಯಿದ್ದಾಗ ಸಂಸತ್ತಿನಲ್ಲಿ ಈ ಕಾಯ್ದೆಯ ಪ್ರಸ್ತಾವ ಇಟ್ಟಿದ್ದರು. ಆದರೆ, ಈಗ ಕಾಂಗ್ರೆಸ್ಸಿನವರೇ ವಿರೋಧಿಸುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ದಿಕ್ಕು ತಪ್ಪಿಸಿ, ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಅಮಾಯಕರ ದಿಕ್ಕು ತಪ್ಪಿಸಿ ಪೊಲೀಸರು, ಸೈನಿಕರ ಮೇಲೆ ಕಲ್ಲು ಹೊಡೆಸುವ ಕೆಲಸ ಕಾಂಗ್ರೆಸ್ನವರು ಮಾಡಿಸುತ್ತಿದ್ದಾರೆ. ಕಾಶ್ಮೀರದಿಂದ ಕನ್ಯಾಕುಮಾರಿಗೆ ಇದೇ ಕುತಂತ್ರ ಮಾಡುತ್ತಿದ್ದಾರೆ. ಅವರ ಕುತಂತ್ರಕ್ಕೆ ಅಮಾಯಕರು ಬಲಿಯಾಗುತ್ತಿದ್ದಾರೆ. ಕಾಂಗ್ರೆಸ್ನವರು ಅವರ ಅಸ್ತಿತ್ವ ಉಳಿಸಿಕೊಳ್ಳಲು ಜನರಿಗೆ ಪ್ರಚೋದಿಸುತ್ತಿದ್ದಾರೆ’ ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/amit-shah-accuses-rahul-gandhi-priyanka-gandhi-vadra-of-instigating-riots-by-misleading-people-over-695702.html" target="_blank">ಸಿಎಎ ವಿರೋಧಿ ಗಲಭೆಗೆ ರಾಹುಲ್, ಪ್ರಿಯಾಂಕಾ ಪ್ರಚೋದನೆ: ಅಮಿತ್ ಶಾ ಆರೋಪ</a></p>.<p>‘ದೇಶದ ಆರ್ಥಿಕ ಸ್ಥಿತಿ ಸದ್ಯ ಹೇಳಿಕೊಳ್ಳುವಂತಹ ಸ್ಥಿತಿಯಲ್ಲಿ ಇಲ್ಲ. ಆದರೆ, ಅದು ಕ್ಷಣಿಕ ಮಾತ್ರ. ಕಪ್ಪು ಹಣ, ಖೋಟಾ ನೋಟು ತಡೆಯುವ ಉದ್ದೇಶದಿಂದ ನೋಟು ರದ್ದತಿ ಮಾಡಲಾಗಿತ್ತು. ಆರ್ಥಿಕ ಸ್ಥಿತಿ ಸುಭದ್ರಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿತ್ತು. ಎಲ್ಲವೂ ಬರುವ ದಿನಗಳಲ್ಲಿ ಸುಧಾರಿಸಲಿದೆ’ ಎಂದು ಭವಿಷ್ಯ ನುಡಿದರು.</p>.<p><strong>‘ಕಾಂಗ್ರೆಸ್ ಟೀಕಿಸಲು ಹೋಗಿ ರೆಡ್ಡಿ ಆವೇಶದ ಮಾತು’</strong></p>.<p>‘ಸಿಎಎ ವಿರುದ್ಧ ಜನರನ್ನು ಎತ್ತಿ ಕಟ್ಟುತ್ತಿರುವ ಕಾಂಗ್ರೆಸ್ ಪಕ್ಷವನ್ನು ಟೀಕಿಸಲು ಹೋಗಿ ಶಾಸಕ ಜಿ. ಸೋಮಶೇಖರ ರೆಡ್ಡಿ ಅವರು, ‘ಹಿಂದೂಗಳನ್ನು ಕೆಣಕಿದರೆ ಸುಮ್ಮನಿರಲ್ಲ’ ಎಂದು ಆವೇಶದಿಂದ ಮಾತಾಡಿದ್ದಾರೆಯೇಹೊರತು ಯಾವುದೇ ದುರುದ್ದೇಶವಿರಲಿಲ್ಲ’ ಎಂದು ಲಕ್ಷ್ಮಣ ಸವದಿ ಹೇಳಿದರು.</p>.<p>‘ರೆಡ್ಡಿ ಹೇಳಿಕೆಯನ್ನು ಸಮರ್ಥಿಸುವುದು ಅಥವಾ ವಿರೋಧಿಸುವ ಪ್ರಶ್ನೆಯಿಲ್ಲ. ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಪ್ರಚೋದನಕಾರಿ ಭಾಷಣ ಮಾಡಿದ್ದರ ಬಗ್ಗೆ ಕಾಂಗ್ರೆಸ್ನವರೇಕೇ ಮಾತನಾಡುತ್ತಿಲ್ಲ’ ಎಂದು ಅವರು ಪ್ರಶ್ನಿಸಿದರು.</p>.<p><strong>ಸೋಮಶೇಖರ ರೆಡ್ಡಿ ಬಂಧನಕ್ಕೆ ಕಾಂಗ್ರೆಸ್ ಆಗ್ರಹ</strong></p>.<p>‘ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಮಾತನಾಡಿರುವ ಶಾಸಕ ಜಿ. ಸೋಮಶೇಖರ ರೆಡ್ಡಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ತಕ್ಷಣವೇ ಅವರನ್ನು ಬಂಧಿಸಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ.</p>.<p>ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್, ವಿಧಾನ ಪರಿಷತ್ ಸದಸ್ಯರಾದ ಅಲ್ಲಂ ವೀರಭದ್ರಪ್ಪ, ಕೆ.ಸಿ. ಕೊಂಡಯ್ಯ, ಮಾಜಿಶಾಸಕರಾದ ಸೂರ್ಯನಾರಾಯಣ ರೆಡ್ಡಿ, ಆಂಜನೇಯಲು ಭಾನುವಾರ ಬಳ್ಳಾರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಮುಸ್ಲಿಮರು ಹೆದರಬೇಕಿಲ್ಲ. ಅದರಿಂದ ಯಾರಿಗೂಯಾವುದೇ ತೊಂದರೆ ಆಗುವುದಿಲ್ಲ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.</p>.<p>ಭಾನುವಾರ ನಗರದಲ್ಲಿ ಸಿಎಎ ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮನಮೋಹನ್ ಸಿಂಗ್ ಅವರು ಪ್ರಧಾನಿಯಿದ್ದಾಗ ಸಂಸತ್ತಿನಲ್ಲಿ ಈ ಕಾಯ್ದೆಯ ಪ್ರಸ್ತಾವ ಇಟ್ಟಿದ್ದರು. ಆದರೆ, ಈಗ ಕಾಂಗ್ರೆಸ್ಸಿನವರೇ ವಿರೋಧಿಸುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ದಿಕ್ಕು ತಪ್ಪಿಸಿ, ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಅಮಾಯಕರ ದಿಕ್ಕು ತಪ್ಪಿಸಿ ಪೊಲೀಸರು, ಸೈನಿಕರ ಮೇಲೆ ಕಲ್ಲು ಹೊಡೆಸುವ ಕೆಲಸ ಕಾಂಗ್ರೆಸ್ನವರು ಮಾಡಿಸುತ್ತಿದ್ದಾರೆ. ಕಾಶ್ಮೀರದಿಂದ ಕನ್ಯಾಕುಮಾರಿಗೆ ಇದೇ ಕುತಂತ್ರ ಮಾಡುತ್ತಿದ್ದಾರೆ. ಅವರ ಕುತಂತ್ರಕ್ಕೆ ಅಮಾಯಕರು ಬಲಿಯಾಗುತ್ತಿದ್ದಾರೆ. ಕಾಂಗ್ರೆಸ್ನವರು ಅವರ ಅಸ್ತಿತ್ವ ಉಳಿಸಿಕೊಳ್ಳಲು ಜನರಿಗೆ ಪ್ರಚೋದಿಸುತ್ತಿದ್ದಾರೆ’ ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/amit-shah-accuses-rahul-gandhi-priyanka-gandhi-vadra-of-instigating-riots-by-misleading-people-over-695702.html" target="_blank">ಸಿಎಎ ವಿರೋಧಿ ಗಲಭೆಗೆ ರಾಹುಲ್, ಪ್ರಿಯಾಂಕಾ ಪ್ರಚೋದನೆ: ಅಮಿತ್ ಶಾ ಆರೋಪ</a></p>.<p>‘ದೇಶದ ಆರ್ಥಿಕ ಸ್ಥಿತಿ ಸದ್ಯ ಹೇಳಿಕೊಳ್ಳುವಂತಹ ಸ್ಥಿತಿಯಲ್ಲಿ ಇಲ್ಲ. ಆದರೆ, ಅದು ಕ್ಷಣಿಕ ಮಾತ್ರ. ಕಪ್ಪು ಹಣ, ಖೋಟಾ ನೋಟು ತಡೆಯುವ ಉದ್ದೇಶದಿಂದ ನೋಟು ರದ್ದತಿ ಮಾಡಲಾಗಿತ್ತು. ಆರ್ಥಿಕ ಸ್ಥಿತಿ ಸುಭದ್ರಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿತ್ತು. ಎಲ್ಲವೂ ಬರುವ ದಿನಗಳಲ್ಲಿ ಸುಧಾರಿಸಲಿದೆ’ ಎಂದು ಭವಿಷ್ಯ ನುಡಿದರು.</p>.<p><strong>‘ಕಾಂಗ್ರೆಸ್ ಟೀಕಿಸಲು ಹೋಗಿ ರೆಡ್ಡಿ ಆವೇಶದ ಮಾತು’</strong></p>.<p>‘ಸಿಎಎ ವಿರುದ್ಧ ಜನರನ್ನು ಎತ್ತಿ ಕಟ್ಟುತ್ತಿರುವ ಕಾಂಗ್ರೆಸ್ ಪಕ್ಷವನ್ನು ಟೀಕಿಸಲು ಹೋಗಿ ಶಾಸಕ ಜಿ. ಸೋಮಶೇಖರ ರೆಡ್ಡಿ ಅವರು, ‘ಹಿಂದೂಗಳನ್ನು ಕೆಣಕಿದರೆ ಸುಮ್ಮನಿರಲ್ಲ’ ಎಂದು ಆವೇಶದಿಂದ ಮಾತಾಡಿದ್ದಾರೆಯೇಹೊರತು ಯಾವುದೇ ದುರುದ್ದೇಶವಿರಲಿಲ್ಲ’ ಎಂದು ಲಕ್ಷ್ಮಣ ಸವದಿ ಹೇಳಿದರು.</p>.<p>‘ರೆಡ್ಡಿ ಹೇಳಿಕೆಯನ್ನು ಸಮರ್ಥಿಸುವುದು ಅಥವಾ ವಿರೋಧಿಸುವ ಪ್ರಶ್ನೆಯಿಲ್ಲ. ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಪ್ರಚೋದನಕಾರಿ ಭಾಷಣ ಮಾಡಿದ್ದರ ಬಗ್ಗೆ ಕಾಂಗ್ರೆಸ್ನವರೇಕೇ ಮಾತನಾಡುತ್ತಿಲ್ಲ’ ಎಂದು ಅವರು ಪ್ರಶ್ನಿಸಿದರು.</p>.<p><strong>ಸೋಮಶೇಖರ ರೆಡ್ಡಿ ಬಂಧನಕ್ಕೆ ಕಾಂಗ್ರೆಸ್ ಆಗ್ರಹ</strong></p>.<p>‘ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಮಾತನಾಡಿರುವ ಶಾಸಕ ಜಿ. ಸೋಮಶೇಖರ ರೆಡ್ಡಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ತಕ್ಷಣವೇ ಅವರನ್ನು ಬಂಧಿಸಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ.</p>.<p>ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್, ವಿಧಾನ ಪರಿಷತ್ ಸದಸ್ಯರಾದ ಅಲ್ಲಂ ವೀರಭದ್ರಪ್ಪ, ಕೆ.ಸಿ. ಕೊಂಡಯ್ಯ, ಮಾಜಿಶಾಸಕರಾದ ಸೂರ್ಯನಾರಾಯಣ ರೆಡ್ಡಿ, ಆಂಜನೇಯಲು ಭಾನುವಾರ ಬಳ್ಳಾರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>