ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರೀಕರಣ ಬಿಟ್ಟು ಉಳಿದ ತಾಂತ್ರಿಕ ಕೆಲಸಗಳನ್ನು ಮಾಡಿಕೊಳ್ಳಿ: ಆರ್. ಅಶೋಕ್

Last Updated 10 ಮೇ 2020, 10:22 IST
ಅಕ್ಷರ ಗಾತ್ರ

ಬೆಂಗಳೂರು: ‘ಕೊರೊನಾ ಸೋಂಕು ಹರಡುವ ಭೀತಿ ಇರುವುದರಿಂದ ಸದ್ಯ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ. ಆದರೆ, ಉಳಿದ ತಾಂತ್ರಿಕ ಕೆಲಸಗಳನ್ನು ಮಾಡಿಕೊಳ್ಳಬಹುದು’ ಎಂದು ಕಂದಾಯ ಸಚಿವ ಆರ್. ಅಶೋಕ್‌ ಹೇಳಿದ್ದಾರೆ.

ನಗರದಲ್ಲಿ ಭಾನುವಾರ ತಮ್ಮನ್ನು ಭೇಟಿ ಮಾಡಿದ ನಿರ್ಮಾಪಕರ ಸಂಘದ ಸದಸ್ಯರಿಗೆ ಈ ಕುರಿತು ಸೂಚನೆ ನೀಡಿರುವ ಅಶೋಕ್, ‘ಚಿತ್ರೀಕರಣಕ್ಕೆ ಅವಕಾಶ ನೀಡಿದರೆ ಕೊರೊನಾ ಸೋಂಕು ನಿಯಂತ್ರಣ ನಿಯಮ ಪಾಲನೆ ಕಷ್ಟವಾಗಬಹುದು. ಆದರೆ, ಡಬ್ಬಿಂಗ್, ಎಡಿಟಿಂಗ್, ಗ್ರಾಫಿಕ್ಸ್‌, ರಿರೆಕಾರ್ಡಿಂಗ್‌ನಂತಹ ಚಟುವಟಿಕೆಯನ್ನು ನಡೆಸಬಹುದು. ಈ ವೇಳೆಯೂ, ಸರ್ಕಾರದ ಆದೇಶ ಮತ್ತು ನಿಯಮ ಪಾಲಿಸಬೇಕು’ ಎಂದು ಹೇಳಿದ್ದಾರೆ.

ತಾಂತ್ರಿಕ ಚಟುವಟಿಕೆ ನಡೆಸಲು ಅನುಮತಿ ನೀಡಿರುವ ಸರ್ಕಾರಕ್ಕೆ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್‌ಕುಮಾರ್ ಧನ್ಯವಾದ ತಿಳಿಸಿದ್ದಾರೆ.

ಸಂಘದ ಉಪಾಧ್ಯಕ್ಷ ಎಂ.ಜಿ.ರಾಮಮೂರ್ತಿ, ಕಾರ್ಯದರ್ಶಿ ಕೆ.ಮಂಜು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಎ.ಗಣೇಶ್ , ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟದ ಉಪಾಧ್ಯಕ್ಷ ರವಿಶಂಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT