ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೆರೆ ಅಭಿವೃದ್ಧಿ: ಕಾ‌ಯ್ದೆಗೆ ವಾರದಲ್ಲಿ ತಿದ್ದುಪಡಿ’

Last Updated 11 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಕಲಬುರ್ಗಿ: ‘ವಿವಿಧ ಇಲಾಖೆಗಳ ಸುಪರ್ದಿಯಲ್ಲಿರುವ ಕೆರೆಗಳ ಸಮಗ್ರ ಅಭಿವೃದ್ಧಿಗಾಗಿ ‘ಕೆರೆ ಅಭಿವೃದ್ಧಿ ಪ್ರಾಧಿಕಾರ’ ರಚನೆಗೆ ಸಂಬಂಧಿಸಿದ ಕಾಯ್ದೆಗೆ ವಾರದಲ್ಲಿ ತಿದ್ದುಪಡಿ ತರಲಾಗುವುದು’ ಎಂದು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.

‘ಈ ಪ್ರಾಧಿಕಾರದ ಉಸ್ತುವಾರಿಯಲ್ಲಿಯೇ ಒತ್ತುವರಿ ಹಾಗೂ ಹೂಳು ತೆರವು ಆರಂಭಿಸಲಾಗುವುದು. ಇದಕ್ಕಾಗಿ ₹60 ಕೋಟಿ ಮೀಸಲಿಡಲಾಗಿದೆ. ಮೊದಲ ಹಂತದಲ್ಲಿ ರಾಜ್ಯದಾದ್ಯಂತ 1,251 ಕೆರೆಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ಆಳಂದ ತಾಲ್ಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಭಾನುವಾರ ತಿಳಿಸಿದರು.

‘ರಾಜ್ಯದಲ್ಲಿ ಒಟ್ಟು 36 ಸಾವಿರ ಕೆರೆಗಳಿದ್ದವು. ಅವುಗಳಲ್ಲಿ 28 ಸಾವಿರ ಕೆರೆ ಮಾತ್ರ ಉಳಿದಿದೆ. 8 ಸಾವಿರ ಕೆರೆಗಳು ದಾಖಲೆಯಿಂದಲೇ ನಾಪತ್ತೆಯಾಗಿವೆ. ಹೀಗಾಗಿ ಕೆರೆಗಳ ಸಂರಕ್ಷಣೆಗಾಗಿ ಪ್ರಾಧಿಕಾರ ರಚನೆ ಮಾಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT