ಆದರೆ, ಜೆಡಿಎಸ್ ತೊರೆದು ಬಿಜೆಪಿ ಸೇರಿ ಹುಣಸೂರಿನಲ್ಲಿ ನಡೆದಿದ್ದ ಉಪಚುನಾವಣೆಯಲ್ಲಿ ಸೋತಿದ್ದ ಮಾಜಿ ಸಚಿವ ಎಚ್.ವಿಶ್ವನಾಥ್ ಅವರನ್ನು ಪರಿಷತ್ ಚುನಾವಣೆಗೆ ಪಕ್ಷ ಪರಿಗಣಿಸಿಲ್ಲ. ಕಲಬುರ್ಗಿಯ ಸುನಿಲ್ ವಲ್ಯಾಪುರೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಾಪಸಿಂಹ ನಾಯಕ್ ಅವರು ಟಿಕೆಟ್ ಪಡೆದುಕೊಂಡಿರುವ ಇತರ ಅಭ್ಯರ್ಥಿಗಳಾಗಿದ್ದಾರೆ. ನಾಮ ಪತ್ರ ಸಲ್ಲಿಕೆಗೆ ಗುರುವಾರ ಕಡೆಯ ದಿನವಾಗಿದ್ದು, ಕೊನೆಯ ಹಂತದಲ್ಲಿ ಟಿಕೆಟ್ ಘೋಷಿಸಲಾಗಿದೆ.