‘ಗ್ರಾಮದ ಬುಡ್ಗ ಜಂಗಮ ಸಮುದಾಯದ ಅಶ್ವ ರಾಘವೇಂದ್ರ–ಮಮತಾ ಅವರ ಮಗ ವೆಂಕಟಸ್ವಾಮಿ, ಮಂಗಳವಾರ ಸಂಜೆ ಮನೆ ಅಂಗಳದಲ್ಲಿ ಆಟವಾಡುತ್ತಿದ್ದ. ಈ ವೇಳೆ ಏಕಾಏಕಿ ಬಂದ ಚಿರತೆ ಆತನನ್ನು ಹೊತ್ತುಕೊಂಡು ಹೋಯಿತು. ಬಾಲಕನ ತಾಯಿ ಹಾಗೂ ಗ್ರಾಮಸ್ಥರು ಬೆನ್ನಟ್ಟಿ ಹೋದರು. ಮುಳ್ಳಿನ ಪೊದೆಯಲ್ಲಿ ಸುಮಾರು ಅರ್ಧ ತಾಸು ಹುಡುಕಾಡಿದ ನಂತರ ಬಾಲಕನ ಶವ ಪತ್ತೆಯಾಯಿತು’ ಎಂದು ಪ್ರತ್ಯಕ್ಷದರ್ಶಿ ಎಸ್.ಕೆ.ಬಸವರಾಜ ತಿಳಿಸಿದರು.