<p><strong>ಶ್ರೀರಾಂಪುರ (ಚಿತ್ರದುರ್ಗ):</strong> ದಾಳಿಂಬೆ ತೋಟಕ್ಕೆ ನುಗ್ಗಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳ ಸಮ್ಮುಖದಲ್ಲೇ ಗ್ರಾಮಸ್ಥರು ದೊಣ್ಣೆ, ಕಲ್ಲುಗಳಿಂದ ಹೊಡೆದು ಕೊಂದು ಹಾಕಿದ ಘಟನೆ ಹೊಸದುರ್ಗ ತಾಲ್ಲೂಕಿನ ಕುರುಬರಹಳ್ಳಿಯಲ್ಲಿ ಬುಧವಾರ ನಡೆದಿದೆ.</p>.<p>ಅರಣ್ಯ ಇಲಾಖೆ ಬಲೆ ಹಾಕಿ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಕುಪಿತಗೊಂಡ ಜನರು ಚಿರತೆ ಮೇಲೆ ಮುಗಿಬಿದ್ದು ಸಾಯಿಸಿದ್ದಾರೆ. ಸ್ಥಳದಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಅಸಹಾಯಕರಾಗಿದ್ದಾರೆ.</p>.<p>ಶ್ರೀರಾಂಪುರ ಹೋಬಳಿಯ ಕುರುಬರಹಳ್ಳಿಯ ದಿನೇಶ್ ಎಂಬುವರ ದಾಳಿಂಬೆ ತೋಟದಲ್ಲಿ ಬುಧವಾರ ನಸುಕಿನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಜಮೀನಿಗೆ ಬಂದಿದ್ದ ಮಹಿಳೆ ಸೇರಿ ಮೂವರ ಮೇಲೆ ದಾಳಿ ನಡೆಸಿತ್ತು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಕಾರ್ಯಾಚರಣೆ ಆರಂಭಿಸಿದ್ದರು.</p>.<p>ಪೊದೆಯಲ್ಲಿ ಅವಿತು ಕುಳಿತಿದ್ದ ಚಿರತೆ ಪರಾರಿಯಾಗಲು ಪ್ರಯತ್ನಿಸಿ ಮಾವಿನ ಮರವೇರಿತು. ಆಗ ಆಕ್ರೋಶಗೊಂಡ ಸುಮಾರು 50ಕ್ಕೂ ಹೆಚ್ಚು ಜನರ ಗುಂಪು, ಕಲ್ಲುಗಳಿಂದ ಹೊಡೆದು ಚಿರತೆಯನ್ನು ನೆಲಕ್ಕೆ ಉರುಳಿಸಿತು. ತಪ್ಪಿಸಿಕೊಳ್ಳುವ ಭರದಲ್ಲಿದ್ದ ಚಿರತೆಯು ಬಲೆಗೆ ಬಿದ್ದಿತು.</p>.<p>ಸ್ಥಳದಲ್ಲಿ ಜಮಾಯಿಸಿದ ಜನರು ದೊಣ್ಣೆಗಳಿಂದ ಹೊಡೆದರು. ಇದನ್ನು ತಡೆಯಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಜನರ ನಡುವೆ ವಾಗ್ವಾದ ನಡೆಯಿತು. ಗಂಭೀರವಾಗಿ ಗಾಯಗೊಂಡಿದ್ದ ಚಿರತೆಯನ್ನು ಚಿತ್ರದುರ್ಗದ ಆಡುಮಲ್ಲೇಶ್ವರ ಪ್ರಾಣಿಸಂಗ್ರಹಾಲಯಕ್ಕೆ ಸಾಗಿಸಲಾಯಿತು. ಆದರೆ, ಅದು ಮಾರ್ಗ ಮಧ್ಯದಲ್ಲೇ ಮೃತಪಟ್ಟಿತು.</p>.<p>ಉರುಳಿಗೆ ಸಿಲುಕಿದ್ದರಿಂದ ಚಿರತೆ ಕಾಲೊಂದನ್ನು ಕಳೆದುಕೊಂಡಿತ್ತು. ಮೂರು ಕಾಲಿನಲ್ಲಿ ಓಡಾಡುತ್ತಿದ್ದ ಇದು ಜನರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಾಂಪುರ (ಚಿತ್ರದುರ್ಗ):</strong> ದಾಳಿಂಬೆ ತೋಟಕ್ಕೆ ನುಗ್ಗಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳ ಸಮ್ಮುಖದಲ್ಲೇ ಗ್ರಾಮಸ್ಥರು ದೊಣ್ಣೆ, ಕಲ್ಲುಗಳಿಂದ ಹೊಡೆದು ಕೊಂದು ಹಾಕಿದ ಘಟನೆ ಹೊಸದುರ್ಗ ತಾಲ್ಲೂಕಿನ ಕುರುಬರಹಳ್ಳಿಯಲ್ಲಿ ಬುಧವಾರ ನಡೆದಿದೆ.</p>.<p>ಅರಣ್ಯ ಇಲಾಖೆ ಬಲೆ ಹಾಕಿ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಕುಪಿತಗೊಂಡ ಜನರು ಚಿರತೆ ಮೇಲೆ ಮುಗಿಬಿದ್ದು ಸಾಯಿಸಿದ್ದಾರೆ. ಸ್ಥಳದಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಅಸಹಾಯಕರಾಗಿದ್ದಾರೆ.</p>.<p>ಶ್ರೀರಾಂಪುರ ಹೋಬಳಿಯ ಕುರುಬರಹಳ್ಳಿಯ ದಿನೇಶ್ ಎಂಬುವರ ದಾಳಿಂಬೆ ತೋಟದಲ್ಲಿ ಬುಧವಾರ ನಸುಕಿನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಜಮೀನಿಗೆ ಬಂದಿದ್ದ ಮಹಿಳೆ ಸೇರಿ ಮೂವರ ಮೇಲೆ ದಾಳಿ ನಡೆಸಿತ್ತು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಕಾರ್ಯಾಚರಣೆ ಆರಂಭಿಸಿದ್ದರು.</p>.<p>ಪೊದೆಯಲ್ಲಿ ಅವಿತು ಕುಳಿತಿದ್ದ ಚಿರತೆ ಪರಾರಿಯಾಗಲು ಪ್ರಯತ್ನಿಸಿ ಮಾವಿನ ಮರವೇರಿತು. ಆಗ ಆಕ್ರೋಶಗೊಂಡ ಸುಮಾರು 50ಕ್ಕೂ ಹೆಚ್ಚು ಜನರ ಗುಂಪು, ಕಲ್ಲುಗಳಿಂದ ಹೊಡೆದು ಚಿರತೆಯನ್ನು ನೆಲಕ್ಕೆ ಉರುಳಿಸಿತು. ತಪ್ಪಿಸಿಕೊಳ್ಳುವ ಭರದಲ್ಲಿದ್ದ ಚಿರತೆಯು ಬಲೆಗೆ ಬಿದ್ದಿತು.</p>.<p>ಸ್ಥಳದಲ್ಲಿ ಜಮಾಯಿಸಿದ ಜನರು ದೊಣ್ಣೆಗಳಿಂದ ಹೊಡೆದರು. ಇದನ್ನು ತಡೆಯಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಜನರ ನಡುವೆ ವಾಗ್ವಾದ ನಡೆಯಿತು. ಗಂಭೀರವಾಗಿ ಗಾಯಗೊಂಡಿದ್ದ ಚಿರತೆಯನ್ನು ಚಿತ್ರದುರ್ಗದ ಆಡುಮಲ್ಲೇಶ್ವರ ಪ್ರಾಣಿಸಂಗ್ರಹಾಲಯಕ್ಕೆ ಸಾಗಿಸಲಾಯಿತು. ಆದರೆ, ಅದು ಮಾರ್ಗ ಮಧ್ಯದಲ್ಲೇ ಮೃತಪಟ್ಟಿತು.</p>.<p>ಉರುಳಿಗೆ ಸಿಲುಕಿದ್ದರಿಂದ ಚಿರತೆ ಕಾಲೊಂದನ್ನು ಕಳೆದುಕೊಂಡಿತ್ತು. ಮೂರು ಕಾಲಿನಲ್ಲಿ ಓಡಾಡುತ್ತಿದ್ದ ಇದು ಜನರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>