‘ಇತ್ತೀಚೆಗೆ ಜಿಲ್ಲೆಗೆ ಬಂದಿದ್ದ ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ನಡೆದುಕೊಂಡ ರೀತಿಯನ್ನು ಜನ ನೋಡಿದ್ದಾರೆ. ಸಚಿವರ ಪಕ್ಕದಲ್ಲೇ ಇದ್ದ ಸಂಸದರು ಸಹ ಎಲ್ಲಾ ಗಮನಿಸಿದ್ದಾರೆ. ಕೆರೆ, ರಾಜಕಾಲುವೆಗಳ ಒತ್ತುವರಿ ತೆರವಿಗೆ ನಾವು ಸಚಿವರಿಗೆ ಮನವಿ ಮಾಡಿದ್ದೆವು. ಆದರೆ, ಸಚಿವರು ಮಹಿಳೆಯರು ಎಂದೂ ನೋಡದೆ ಅವಾಚ್ಯ ಶಬ್ದಗಳಿಂದ ನಿಂದಿಸಿದರು’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.