ಚರ್ಚೆಯೇ ಆಗಿಲ್ಲ:ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಮತ್ತು ಸಿಎಎ ನಡುವೆ ಸಂಬಂಧವೇ ಇಲ್ಲ. ದೇಶದಾದ್ಯಂತ ಎನ್ಆರ್ಸಿ ಜಾರಿ ಮಾಡುವ ಕುರಿತು ಚರ್ಚೆಯೇ ಆಗಿಲ್ಲ. ಆದರೂ, ವಿರೋಧ ಪಕ್ಷಗಳು ಎರಡರ ನಡುವೆ ಸಂಬಂಧ ಕಲ್ಪಿಸಿ ಜನರಲ್ಲಿ ಭಯ ಸೃಷ್ಟಿಸುತ್ತಿವೆ. ಮನೆ, ಮನೆಗೂ ತೆರಳಿ ಸತ್ಯ ಹೇಳುವ ಮೂಲಕ ಗೊಂದಲಕ್ಕೆ ತೆರೆ ಎಳೆಯಿರಿ ಎಂದು ಬಿಜೆಪಿ ಕಾರ್ಯಕರ್ತರಿಗೆ ರಾಜನಾಥ್ ಸಿಂಗ್ ಕರೆ ನೀಡಿದರು.