ಬೆಂಗಳೂರು: ‘ಆರ್.ರೋಷನ್ ಬೇಗ್ ಐಎಂಎ (ಐ ಮಾನಿಟರಿ ಅಡ್ವೈಸರಿ) ಪ್ರಕರಣದಲ್ಲಿ ‘ಸಾಕ್ಷಿ’ ಆಗಿದ್ದು ಅವರಿಗೆ ರಕ್ಷಣೆ, ಸ್ವಾತಂತ್ರ್ಯ ಮತ್ತು ಅವರ ಮುಕ್ತ ಓಡಾಟಕ್ಕೆ ಅಗತ್ಯ ಕ್ರಮ ಕೈಗೊಳ್ಳಿ’ ಎಂದು ರಾಜ್ಯಪಾಲ ವಜುಭಾಯಿ ವಾಲಾ, ಎಸ್ಐಟಿ ಮುಖ್ಯಸ್ಥರಾಗಿದ್ದ ಬಿ.ಆರ್. ರವಿಕಾಂತೇಗೌಡ ಅವರಿಗೆ ಬರೆದಿರುವ ಪತ್ರ ಈಗ ಕಾನೂನು ತಜ್ಞರ ವಲಯದಲ್ಲಿ ಜಿಜ್ಞಾಸೆಗೆ ಕಾರಣವಾಗಿದೆ.