‘ಸೋಮವಾರ ಮಧ್ಯಾಹ್ನ 2.45ರ ಸುಮಾರಿಗೆ ಕರೆ ಮಾಡಿದ ವ್ಯಕ್ತಿ, ಭದ್ರಾವತಿಯಿಂದ ಮಾತನಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದಾನೆ. ಸಾವರ್ಕರ್ ಬಗ್ಗೆ ನಾನು ನೀಡಿದ ಹೇಳಿಕೆಗೆ ವಾರದೊಳಗೆ ಪತ್ರಿಕಾಗೋಷ್ಠಿ ಕರೆದು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಜೀವಕ್ಕೆ ಆಪತ್ತು ತಂದುಕೊಳ್ಳುತ್ತೀರಿ ಎಂದು ಬೆದರಿಕೆವೊಡ್ಡಿದ್ದಾನೆ. ಸಾವರ್ಕರ್ಗೆ ಭಾರತ ರತ್ನ ನೀಡಬೇಕು ಎಂಬ ಪ್ರಸ್ತಾವವನ್ನು ಆ ವೇಳೆ ದೇಶದಾದ್ಯಂತ ಕಾಂಗ್ರೆಸ್ ಖಂಡಿಸಿತ್ತು ಎಂದು ಸಮಾಜಾಯಿಷಿ ನೀಡಿದರೂ ಆತ ಸಮಾಧಾನಗೊಂಡಿಲ್ಲ. ಹೀಗಾಗಿ ನನಗೆ ಜೀವಬೆದರಿಕೆ ಹಾಕಿರುವ ಬಗ್ಗೆ ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡುತ್ತೇನೆ’ ಎಂದು ಡಿ. ಬಸವರಾಜ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.