‘‘ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಬಾಗಲಕೋಟೆಯಿಂದ ಚುನಾವಣೆ ಪ್ರಚಾರ ಮುಗಿಸಿ ರೈಲಿನ ಮೂಲಕ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಶುಕ್ರವಾರ ಸಂಜೆ 5.30ರ ಹೊತ್ತಿಗೆ ಅನಾಮಧೇಯ ವ್ಯಕ್ತಿಯಿಂದ ಕರೆ ಬಂದಿದೆ. ಉರ್ದು ಮಿಶ್ರಿತ ಭಾಷೆಯಲ್ಲಿ ನನ್ನೊಂದಿಗೆ ಏಕವಚನದಲ್ಲಿ ಮಾತನಾಡಿದ್ದಾರೆ. ‘ನೀನು ಬಿಜೆಪಿಯಿಂದ ಮುಸ್ಲಿಮರಿಗೆ ಏಕೆ ಎಂ.ಪಿ. ಟಿಕೆಟ್ ಕೊಡುವುದಿಲ್ಲ’ ಎಂದು ಕೇಳಿ, ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಪದೇ ಪದೇ ‘ಜೀವ ತೆಗೆಯುತ್ತೇನೆ’ ಎಂದು ಹೇಳಿದ್ದಾರೆ’’ ಎಂದು ಆರೋಪಿಸಿದರು.