‘ಹಿಂದೂ ಧರ್ಮವು ನಂಬಿಕೆಗಳ ಆಧಾರದ ಮೇಲೆ ರೂಪಿತಗೊಂಡಿದೆ. ಅಯ್ಯಪ್ಪನು ಕಟ್ಟಾ ಬ್ರಹ್ಮಚಾರಿಯಾಗಿದ್ದ ಕಾರಣ 10ರಿಂದ 50 ವರ್ಷ ವಯಸ್ಸಿನ ಹೆಣ್ಣುಮಕ್ಕಳು ಪ್ರವೇಶಿಸುವಂತಿಲ್ಲ ಎಂಬ ಆಚರಣೆ ಜಾರಿಯಲ್ಲಿದೆ. ಇದನ್ನು ಪ್ರಶ್ನಿಸಿ ಏನು ಪ್ರಯೋಜನ. ಅಲ್ಲದೇ, ಮುಟ್ಟನ್ನು ಹಿಂದೂಧರ್ಮದಲ್ಲಿ ಕೀಳೆಂದು ಪರಿಗಣಿಸಿಯೇ ಇಲ್ಲ. ಕಾಮಾಕ್ಯ ದೇವಸ್ಥಾನದಲ್ಲಿ ಮುಟ್ಟನ್ನು ಪೂಜಿಸುತ್ತಾರೆ. ಇದು ಎಡಪಂಥೀಯರ ಗಮನಕ್ಕೆ ಬರುವುದಿಲ್ಲವೆ ಎಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.