ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ವಕೀಲೆ ಎಂ.ಸಿ.ನಾಗಶ್ರೀ, ‘ಎಲ್ಇಡಿ, ಹ್ಯಾಲೋಜನ್ ಬೆಳಕು ಬಳಸಿ ಸಮುದ್ರಾಳದಲ್ಲಿ ಯಾಂತ್ರೀಕೃತ ದೋಣಿ ಮೂಲಕ ಮೀನುಗಾರಿಕೆ ಮಾಡುವುದರಿಂದ ಅಪರೂಪದ ಮೀನಿನ ಸಂತತಿ ಹಾಗೂ ಮೀನು ಮರಿಗಳು ನಾಶವಾಗುತ್ತವೆ. ಇದು ಮೀನು ಉತ್ಪತ್ತಿ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದಲೇ ಕೇಂದ್ರ ಸರ್ಕಾರಈ ನಿರ್ಧಾರ ಕೈಗೊಂಡಿದೆ’ ಎಂದು ಸಮಜಾಯಿಷಿ ನೀಡಿದರು.