ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕರೆ ನೀಡಿದಂತೆ, 9 ಗಂಟೆಗೆ ಸರಿಯಾಗಿ 9 ನಿಮಿಷಕ್ಕೆ ಮನೆಯ ಬಾಲ್ಕನಿಯಲ್ಲಿ ದೀಪ ಬೆಳಗಿ, ಕೋವಿಡ್- 19 ವಿರುದ್ಧದ ಹೋರಾಟದಲ್ಲಿ ನಮ್ಮ ಒಗ್ಗಟ್ಟು, ಇಚ್ಛಾಶಕ್ತಿಯನ್ನು ಪ್ರದರ್ಶಿಸಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.