ಹುಬ್ಬಳ್ಳಿ: ‘ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ಗೆ ಸ್ಪಷ್ಟ ನಿಲುವು ಇಲ್ಲ. ಸಮಾಜಕ್ಕೆ ಒಳ್ಳೆಯದು ಮಾಡುವ ವಿಚಾರದಿಂದ ಈ ಹೋರಾಟ ಮಾಡುತ್ತಿಲ್ಲ. ಕಾಂಗ್ರೆಸ್ ಮೊದಲಿನಿಂದಲೂ ಎಡಬಿಡಂಗಿ ನೀತಿ, ಹಿಂದೂವಿರೋಧಿ ನೀತಿಯಿಂದ ಕಾರ್ಯನಿರ್ವಹಿಸುತ್ತಿದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್- ಜೆಡಿಎಸ್ ನಿಲುವುಗಳು ಬದಲಾಗುತ್ತಿರುತ್ತವೆ’ಎಂದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಟೀಕಿಸಿದರು.