ಸಮುದಾಯದ ಯುವಜನರು, ಮುಖಂಡರ ಬೇಡಿಕೆಗಳ ಬಗ್ಗೆ ಚರ್ಚಿಸಲಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಆರ್ಥಿಕವಾಗಿ, ಶೈಕ್ಷಣಿಕವಾಗಿ ಬಲಿಷ್ಠ ರಾಗಬೇಕಿದೆ. ಸಮುದಾಯದವರ ಪ್ರಗತಿ ಬಗ್ಗೆ ಚಿಂತನ ಮಂಥನ ನಡೆಸಲಾಯಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದರು. ಗೃಹ ಸಚಿವ ಎಂ.ಬಿ.ಪಾಟೀಲ ಸಹ ಸಮಾಜದ ಅಭಿವೃದ್ಧಿಗೆ ಸಲಹೆಗಳನ್ನು ನೀಡಿದ್ದಾರೆ. ಕಾಂಗ್ರೆಸ್ನ ಲಿಂಗಾಯತ ಸಮುದಾಯದ ಬಹುತೇಕ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು.