‘ಮದ್ಯ ನಿಷೇಧ ಆಂದೋಲನ’ ಸಂಸ್ಥೆ ಆಯೋಜಿಸಿದ ಈ ಹೋರಾಟಕ್ಕೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ. ನಿತ್ಯ 20ರಿಂದ 25 ಕಿ.ಮೀ ಸಾಗುವ ಈ ಯಾತ್ರೆ ಹಿರಿಯೂರು, ಶಿರಾ, ತುಮಕೂರು ಮಾರ್ಗವಾಗಿ ಜ.30ರಂದು ಬೆಂಗಳೂರು ತಲುಪಲಿದೆ. ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ಪಾದಯಾತ್ರೆಗೆ ಮಾರ್ಗ ಮಧ್ಯದ ಗ್ರಾಮಗಳಲ್ಲಿ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.