ಬೆಂಗಳೂರು: ಮದ್ಯ ಮಾರಾಟ ವಿಷಯ ಮುಖ್ಯಮಂತ್ರಿ ಅವರ ಕೈಯಲ್ಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.
ಮುಖ್ಯಮಂತ್ರಿ ಅವರೊಂದಿಗಿನ ಸಭೆಯ ಬಳಿಕ ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ 4ರಂದು ಯಾವ ವಲಯದಲ್ಲಿ ಮದ್ಯ ಮಾರಾಟ ನಡೆಸಬಹುದು ಎಂಬುದನ್ನು ಮುಖ್ಯಮಂತ್ರಿ ನಿರ್ಧರಿಸಲಿದ್ದಾರೆ ಎಂದರು.
ಒಂದು ಕೋಟಿ ಜನಸಂಖ್ಯೆ ಇರುವ ಬೆಂಗಳೂರು ನಗರವನ್ನು ಒಂದು ಘಟಕವಾಗಿ ನೋಡದೆ ನಾಲ್ಕು ವಲಯಗಳಾಗಿ ವಿಂಗಡಿಸಬೇಕು. ಕೊರೊನಾ ಸೋಂಕು ಅಧಿಕ ಇಲ್ಲದ ವಲಯಗಳಲ್ಲಿ ಚಟುವಟಿಕೆಯನ್ನು ಚುರುಕುಗೊಳಿಸಬೇಕು ಎಂಬ ಸಲಹೆ ನೀಡಲಾಗಿದೆ ಎಂದರು.